RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ: ಚಾಮರಾಜನಗರ ಶಾಸಕ ಹಾಗೂ ಮಾಜಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರಿಂದ ಲಖನ ಜಾರಕಿಹೊಳಿ ಪರ ಮತಯಾಚನೆ

ಗೋಕಾಕ: ಚಾಮರಾಜನಗರ ಶಾಸಕ ಹಾಗೂ ಮಾಜಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರಿಂದ ಲಖನ ಜಾರಕಿಹೊಳಿ ಪರ ಮತಯಾಚನೆ 

ಚಾಮರಾಜನಗರ ಶಾಸಕ ಹಾಗೂ ಮಾಜಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರಿಂದ ಲಖನ ಜಾರಕಿಹೊಳಿ ಪರ ಮತಯಾಚನೆ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ, 25 :-

 
ಚಾಮರಾಜನಗರ ಶಾಸಕ ಹಾಗೂ ಮಾಜಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ಸೋಮವಾರದಂದು ಗೋಕಾಕ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರ ಮತಯಾಚನೆ ನಡೆಸಿದರು.
ಗೋಕಾಕ್ ವಿಧಾನ ಸಭಾ ವ್ಯಾಪ್ತಿಯ ಮಾಲದಿನ್ನಿ, ಉಪ್ಪಾರಟ್ಟಿ, ಚಿಕ್ಕನಂದಿ, ಘಟಪ್ರಭಾ, ಪಾಮಲದಿನ್ನಿ ಹಾಗೂ ಗೋಕಾಕ್ ನಗರದಲ್ಲಿ ಬಿರುಸಿನ ಪ್ರಚಾರ ಕೈಗೊಂಡು, ತಮ್ಮ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರಿಗೆ ವೋಟ್ ನೀಡುವಂತೆ ಕೋರಿದರು.
ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಲ್ಲ ಸಮಾಜದವರಿಗೂ ಸಮಾನ ಪ್ರಾತಿನಿಧ್ಯ ನೀಡುತ್ತ ಬಂದಿದೆ. ಉಪ್ಪಾರ ಸಮಾಜದ ಏಕೈಕ ಶಾಸಕನಾಗಿರುವ ನನಗೆ ಸಚಿವ ಸ್ಥಾನ ನೀಡಿ ಸಾPಷ್ಟು ಜನಪರ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿತು. ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರನ್ನು ಗೆಲ್ಲಿಸುವ ಮೂಲಕ ನಮ್ಮ ನಾಯಕ ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ಅವರ ಕೈ ಬಲಪಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಇನ್ನು ಪುಟ್ಟರಂಗ ಶೆಟ್ಟಿ ಅವರಿಗೆ ಶಾಸಕ ಸತೀಶ್ ಜಾರಕಿಹೊಳಿ, ಪರಸಪ್ಪ ಚೂನಣ್ಣವರ್, ಪ್ರಕಾಶ್ ಬಾಗೇವಾಡಿ ಸೇರಿದಂತೆ ಸಾಕಷ್ಠು ಕಾರ್ಯಕರ್ತರು ಸಾಥ್ ನೀಡಿದರು.

Related posts: