ಗೋಕಾಕ:ದುರದುಂಡಿ-ರಾಜಾಪೂರ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಚಾಲನೆ
ದುರದುಂಡಿ-ರಾಜಾಪೂರ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಚಾಲನೆ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜ 16 :
ದುರದುಂಡಿಯಿಂದ ರಾಜಾಪೂರವರೆಗಿನ 2 ಕಿ.ಮೀ ರಸ್ತೆ ಕಾಮಗಾರಿಗೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಪೂಜೆ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ ನಿಗಮದ ಯೋಜನೆಯಡಿ ಕೈಗೊಳ್ಳಲಿರುವ ಈ ರಸ್ತೆ ಕಾಮಗಾರಿಗೆ 89 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.
ಈಗಾಗಲೇ ಅರಭಾವಿ ಕ್ಷೇತ್ರದಾದ್ಯಂತ ವಿವಿಧ ಯೋಜನೆಗಳಡಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಲಾಗುತ್ತಿದೆ. ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಅನುದಾನದಡಿ ರಸ್ತೆಗಳ ಸುಧಾರಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಜನರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇರುವದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ನೆರವು ಸಿಗಲಿದೆ. ಜೊತೆಗೆ ದುರದುಂಡಿ ಗ್ರಾಮದ ಪ್ರಗತಿಗಾಗಿ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ವಿವಿಧ ಯೋಜನೆಗಳಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಅವರು ಹೇಳಿದರು.
ದುರದುಂಡಿ-ರಾಜಾಪೂರ ರಸ್ತೆ ಕಾಮಗಾರಿಯನ್ನು ಕೈಗೊಂಡು ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಟ್ಟಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮುಖಂಡರು ಸತ್ಕರಿಸಿದರು.
ಹಿಡಕಲ್ ಡ್ಯಾಂ ಘಯೋಮನೀ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ದುರದುಂಡಿ ಗ್ರಾಪಂ ಅಧ್ಯಕ್ಷ ಭೀಮಶಿ ಹುಕ್ಕೇರಿ, ಮುಖಂಡರಾದ ಮಹಾದೇವ ಬಂಗಾರಿ, ಹೊನ್ನಜ್ಜ ಕೋಳಿ, ಡಾ.ಶಂಕರ ಗೋರಖನಾಥ, ಶಿವಮೂರ್ತಿ ಹುಕ್ಕೇರಿ, ರಾಮಣ್ಣಾ ಬಂಡಿ, ಸಿದ್ದಪ್ಪ ಅಂತರಗಟ್ಟಿ, ಭೀಮಪ್ಪ ಅಂತರಗಟ್ಟಿ, ನಿಂಗಪ್ಪ ಮಾಳ್ಯಾಗೋಳ, ಭೀಮಶಿ ಅಂತರಗಟ್ಟಿ, ಸೋಮಯ್ಯಾ ಮಠದ, ಲಕ್ಷ್ಮಣ ನಿಂಗನ್ನವರ, ಮುಂತಾದವರು ಉಪಸ್ಥಿತರಿದ್ದರು.