ಗೋಕಾಕ:ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷರಿಂದ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷರಿಂದ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 13 :
ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತ ಮೊರ್ಚಾದ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾಗಿ ನೇಮಕವಾದ ಗೋಕಾಕ ನಗರದ ನ್ಯಾಯವಾದಿ ಶಫೀ ಜಮಾದರ ಅವರು ಸೋಮವಾರದಂದು ನಗರದ ಸಚಿವರ ಗೃಹ ಕಛೇರಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಗೌರವಿಸಿ ಸತ್ಕರಿಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶಫೀ ಜಮಾದಾರ ಅವರನ್ನು ಅಭಿನಂದಿಸಿದ ಸಚಿವರು ಜಿಲ್ಲಾಯಾದ್ಯಂತ ಸಂಚರಿಸಿ ಪಕ್ಷವನ್ನು ಸಂಘಟಿಸಬೇಕೆಂದು ಸಲಹೆ ನೀಡಿದರು
ಈ ಸಂದರ್ಭದಲ್ಲಿ ಶಿಂಗಾಪೂರ ಗ್ರಾಮ ಪಂಚಾಯತ್ ಅಧ್ಯಕ್ಷ ಸಿದ್ದಪ್ಪ ಚಳ್ಳಾಯಿ, ಮುಖಂಡರುಗಳಾದ ಸಂಭಾಜಿ ಈರಪ್ಪಗೋಳ , ದಸ್ತಗೀರ ಪೀರಜಾದೆ, ನಾರಾಯಣ ತಳವಾರ , ಶೆಮ್ಮು ಮುಲ್ಲಾ, ಶೇಖರ ದೊಡ್ಡಮನಿ, ಶ್ರೀಶೈಲ ಕಂಬಿ, ಲಿಂಗಪ್ಪ ಕಟ್ಟಕರ ,ದಸ್ತಗೀರ ಮುಲ್ಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು