RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ರಾಜೀವ ಗಾಂಧಿ ಮಾನವಸೇವಾ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ : ಅರುಣ ನಿರಗಟ್ಟಿ

ಗೋಕಾಕ:ರಾಜೀವ ಗಾಂಧಿ ಮಾನವಸೇವಾ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ : ಅರುಣ ನಿರಗಟ್ಟಿ 

ರಾಜೀವ ಗಾಂಧಿ ಮಾನವಸೇವಾ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ : ಅರುಣ ನಿರಗಟ್ಟಿ

ಗೋಕಾಕ ಮೇ 5 : ಮಕ್ಕಳ ಸೇವೆಯಲ್ಲಿ ನಿರತರಾದ ವ್ಯಕ್ತಿಗಳಿಗೆ ನೀಡುವ ರಾಜೀವ ಗಾಂಧಿ ಮಾನವಸೇವಾ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ಅರುಣ ನಿರಗಟ್ಟಿ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಭಾರತ ಸರ್ಕಾರವು ಮಕ್ಕಳ ಅಭಿವೃದ್ದಿ, ಮಕ್ಕಳ ರಕ್ಷಣೆ, ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿರುವಂತಹ ವ್ಯಕ್ತಿಗಳನ್ನು ಗುರುತಿಸಿ, ರಾಜೀವಗಾಂಧಿ ಮಾನವಸೇವಾ ಪ್ರಶಸ್ತಿಯನ್ನು 3 ವ್ಯಕ್ತಿಗಳಿಗೆ ನೀಡಿ ಗೌರವಿಸುತ್ತದೆ. ಪ್ರಶಸ್ತಿಯು ರೂ 1 ಲಕ್ಷ ನಗದು ಬಹುಮಾನ, ಬೆಳ್ಳಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
  ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷ ಉತ್ತಮ ಸೇವೆ ಸಲ್ಲಿಸಿದ 3 ವ್ಯಕ್ತಿಗಳು ಹಾಗೂ 5 ಸಂಸ್ಥೆಗಳ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಮತ್ತು ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು  3 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬೆಳಗಾವಿ ಅಥವಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಗೋಕಾಕ ಇವರ ಕಛೇರಿಯಿಂದ  ಪಡೆದು ಆಂಗ್ಲ ಭಾಷೆಯಲ್ಲಿ ಪ್ರಸ್ತಾವಣೆಗಳನ್ನು ದಿ. 15 ರೊಳಗೆ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬೆಳಗಾವಿ ಈ ಕಛೇರಿಗೆ ಸಲ್ಲಿಸತಕ್ಕದ್ದು, ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಛೇರಿ ಗೋಕಾಕ, ದೂರವಾಣಿ ಸಂಖ್ಯೆ: 08332-226365 ಸಂಪರ್ಕಿಸಬೇಕೆಂದು ಸಿಡಿಪಿಒ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: