ಗೋಕಾಕ:ಅಧ್ಯಕ್ಷರಾಗಿ ಅಪ್ಪಯ್ಯಪ್ಪ ಬಡ್ನಿಂಗೋಳ, ಉಪಾಧ್ಯಕ್ಷರಾಗಿ ರಾಜು ಬೈರುಗೋಳ ಅವಿರೋಧ ಆಯ್ಕೆ
ಅಧ್ಯಕ್ಷರಾಗಿ ಅಪ್ಪಯ್ಯಪ್ಪ ಬಡ್ನಿಂಗೋಳ, ಉಪಾಧ್ಯಕ್ಷರಾಗಿ ರಾಜು ಬೈರುಗೋಳ ಅವಿರೋಧ ಆಯ್ಕೆ
ಗೋಕಾಕ ಅ 27 : ಇಲ್ಲಿಯ ದಿ. ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಮಸಗುಪ್ಪಿ ಗ್ರಾಮದ ಅಪ್ಪಯ್ಯಪ್ಪ ಬಡ್ನಿಂಗೋಳ ಹಾಗೂ ಉಪಾಧ್ಯಕ್ಷರಾಗಿ ರಾಜಾಪೂರ ಗ್ರಾಮದ ರಾಜು ಬೈರುಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದಿಲ್ಲಿ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಇವರಿಬ್ಬರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಸಹಾಯಕ ಕೃಷಿ ನಿರ್ದೇಶಕ ಎ.ಡಿ. ಸವದತ್ತಿ ಪ್ರಕಟಿಸಿದರು.
ಅ.18 ರಂದು ನಡೆಯಬೇಕಿದ್ದ ಈ ಚುನಾವಣೆಯಲ್ಲಿ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ, ಮಾಜಿ ಸಚಿವರು ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ, ಖ್ಯಾತ ಉದ್ಯಮಿ ಲಖನ್ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಅವರ ನೇತೃತ್ವದಲ್ಲಿ ಎಲ್ಲ 15 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದ್ದನ್ನು ಸ್ಮರಿಸಬಹುದು. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪಿಎಲ್ಡಿ ಬ್ಯಾಂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ನೂತನ ಅಧ್ಯಕ್ಷ ಅಪ್ಪಯ್ಯಪ್ಪ ಬಡ್ನಿಂಗಗೋಳ ಅವರು ಅಭಿನಂದನಾ ಸಮಾರಂಭದಲ್ಲಿ ಭರವಸೆ ನೀಡಿದರು.
ಉಪಾಧ್ಯಕ್ಷ ರಾಜು ಬೈರುಗೋಳ, ದಿಗ್ದರ್ಶಕರಾದ ಹಣಮಂತ ಅಮ್ಮಿನಭಾವಿ, ಪ್ರಕಾಶ ತೋಳಿನವರ, ಫಕೀರಪ್ಪ ಪೂಜೇರಿ, ಶಿವಮೂರ್ತಿ ಹುಕ್ಕೇರಿ, ಲಗಮಪ್ಪಾ ಬೀರನಗಡ್ಡಿ, ಬಸವರಾಜ ಬಡಗನ್ನವರ, ಅಶೋಕ ಉದ್ದಪ್ಪನವರ, ಸುಭಾಸ ಪಡದಲ್ಲಿ, ಶಕುಂತಲಾ ವಂಟಗೋಡಿ, ಧರೆಪ್ಪ ಮುಧೋಳ, ಶಂಕರ ಬೂಸನ್ನವರ, ಬಸವಂತಪ್ಪ ಹೊಸೂರ, ಅವರು ಉಪಸ್ಥಿತರಿದ್ದರು.