ಗೋಕಾಕ:ದಿ.15 ರಂದು ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ : ವಿಷ್ಣು ಲಾತೂರ
ದಿ.15 ರಂದು ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ : ವಿಷ್ಣು ಲಾತೂರ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 7 :
ಅಖಿಲ ಕರ್ನಾಟಕ ಉಪ್ಪಾರ ಮಹಾಸಭಾದ ವತಿಯಿಂದ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ದಿ.15 ರಂದು ಬೃಹತ್ ಸಮಾವೇಶ ಹಾಗೂ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ 35 ರಿಂದ 40 ಲಕ್ಷದ ವರೆಗೆ ಜನಸಂಖ್ಯೆಯನ್ನು ಹೊಂದಿರುವ ಉಪ್ಪಾರ ಸಮಾಜ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದು ಅಭಿವೃದ್ದಿಯನ್ನು ಹೊಂದಿಲ್ಲ, ಪೂಜ್ಯರು, ಸಮಾಜದ ಮುಖಂಡರು ಹಲವು ದಶಕಗಳಿಂದ ಹೋರಾಟ ನಡೆಸುತ್ತಿದ್ದರು ಫಲ ನೀಡಿಲ್ಲ, ರಾಜಕೀಯವಾಗಿ ಸಣ್ಣ-ಪುಟ್ಟ ಅಧಿಕಾರಕ್ಕೆ ನಮ್ಮನ್ನು ಸೀಮಿತಗೊಳಿಸಲಾಗಿದೆ. ನೌಕರರ ಮೇಲೆ ಇಲಾಖೆಗಳಲ್ಲಿ ನಿರಂತರವಾಗಿ ಅನ್ಯಾಯ ದೌರ್ಜನ್ಯಗಳು ನಡೆಯುತ್ತಿವೆ. ಯಾವು ರಂಗದಲ್ಲೂ ಮಹಿಳೆಯರಿಗೆ ಉನ್ನತ ಮಟ್ಟದ ಸ್ಥಾನಮಾನ ಸಿಕ್ಕಿರುವದಿಲ್ಲ, ಹೀಗೆ ಹಲವಾರು ಸಮಸ್ಯೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಈ ಎಲ್ಲ ಸಮಸ್ಯೆಗಳ ಕುರಿತು ಬೃಹತ ಸಭೆಯನ್ನು ಏರ್ಪಡಿಸಿ ಸರ್ಕಾರ ಹಾಗೂ ರಾಜಕೀಯ ಮುಖಂಡರಿಗೆ ಮನವರಿಕೆ ಮಾಡಲು ಈ ಸಮಾವೇಶವನ್ನು ನಡೆಸಲಾಗುತ್ತಿದ್ದು ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ.