ಘಟಪ್ರಭಾ:ಕಷ್ಟದಲ್ಲಿರುವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ : ಡಾ: ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಜಿ
ಕಷ್ಟದಲ್ಲಿರುವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ : ಡಾ: ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಜಿ
ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಜ 2 :
ಕಷ್ಟದಲ್ಲಿರುವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಇಂಚಲದ ಡಾ: ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು.
ಅವರು ಸಮೀಪದ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಬುಧವಾರದಂದು ಸಂಜೆ ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ ಸತ್ಸಂಗ ಮಹೋತ್ಸವದಲ್ಲಿ ಇಂಚಲದ ಡಾ: ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಜಿಯವರ 80ನೇ ಜನ್ಮ ದಿನೋತ್ಸವ ಅಂಗವಾಗಿ ತೋಟ್ಟಿಲೋತ್ಸವ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಮಾತನಾಡಿದರು.
ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. ಮನುಷ್ಯ ಜೀವಂತ ಇದ್ದಲ್ಲಿ ವಯೋವೃದ್ದರಿಗೆ, ವಿದ್ಯಾರ್ಥಿಗಳಿಗೆ, ರೋಗಿಗಳಿಗೆ ಅಲ್ಲದೇ ಕಷ್ಟದಲ್ಲಿರುವ ಜನರಿಗೆ ಸಹಾಯ ಸಹಕಾರ ನೀಡಿದರೇ ಪುಣ್ಯ ಪ್ರಾಪ್ತಿಯಾಗುತ್ತಿದೆ. ಮನುಷ್ಯನ ಈ ಶರೀರ ನಾಶವಾಗುತ್ತದೆ. ಸತ್ಕಾರ್ಯಗಳಿಗೆ ನೀಡಿದ ಸಹಾಯವೇ ಶ್ರೇಷ್ಠವಾಗುತ್ತದೆ. ನಾವು ಆನಂದ,ಸುಖದಿಂದ ಇದ್ದರೇ ಸಾಲದು ಪರರಿಗೂ ಸಹಾಯ ಮಾಡಿದರೇ ಅದುವೇ ಸುಖ,ಆನಂದ ಸಿಗುತ್ತದೆ. ಇನ್ನೂಬ್ಬರಿಗೆ ಕಷ್ಟದಲ್ಲಿ ಸ್ಪಂದಿಸಿದರೇ ಮುಂದಿನ ಜನ್ಮದಲ್ಲಿ ಮಾನವ,ಮಹಾದೇವನ ರೂಪದಲ್ಲಿ ಹುಟ್ಟುತ್ತೇವೆ. ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಮಹಾತ್ಮರ ಆಶೀರ್ವಚನ ಕೇಳುವುದರ ಮೂಲಕ ಜನ್ಮ ಸಾರ್ಥಕವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಇಂಚಲದ ಡಾ: ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಜಿಯವರ 80ನೇ ಜನ್ಮ ದಿನೋತ್ಸವ ನಿಮಿತ್ಯ ತೋಟ್ಟಿಲೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಶ್ರೀಮಠದ ಪೂಜ್ಯ ಶ್ರೀ ನಿಜಗುಣ ದೇವರು, ನದಿಇಂಗಳಗಾಂವದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜಿ, ಬೈಲಹೊಂಗಲದ ಪೂಜ್ಯ ಶ್ರೀ ಮಹಾದೇವ ಸರಸ್ವತಿ ಮಹಾಸ್ವಾಮಿಜಿ, ಸಸ್ತಾಪೂರದ ಸದಾನಂದ ಮಹಾಸ್ವಾಮಿಜಿ, ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ, ತೊಂಡಿಕಟ್ಟಿಯ ಶ್ರೀ ಅಭಿನವ ವೆಂಕಟೇಶ ಮಹಾರಾಜರು, ಬೀದರನ ಶ್ರೀ ಗಣೇಶಾನಂದ ಮಹಾರಾಜರು, ನವಿಲಮಾಳದ ಶ್ರೀ ಚಿದಾನಂದ ಸ್ವಾಮಿಜಿ, ಕೊಟಬಾಗಿಯ ಶ್ರೀ ಪ್ರಭುದೇವರು, ಜಾರಕಿಹೊಳಿಯ ಶ್ರೀ ಕೃಪಾನಂದ ಸ್ವಾಮಿಜಿ, ಮಾಜಿ ಶಾಸಕ ಬಿ.ಸಿ.ಸರಿಕರ ಹಾಗೂ ಭಕ್ತರು ಇದ್ದರು.
ಇದೇ ಸಂದರ್ಭದಲ್ಲಿ ಶ್ರೀಮಠದ ವತಿಯಿಂದ ದಾನಿಗಳಿಗೆ,ಗಣ್ಯರಿಗೆ, ಪೂಜ್ಯರಿಗೆ ಸನ್ಮಾನಿಸಲಾಯಿತು.