ಮೂಡಲಗಿ:ಉತ್ತರ ಪ್ರದೇಶ ಮೂಲದ 2 ಜನ ಅಲೆಮಾರಿ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ದಿನ ಬಳಕೆ ವಸ್ತುಗಳ ಕಿಟ್ ವಿತರಣೆ
ಉತ್ತರ ಪ್ರದೇಶ ಮೂಲದ 2 ಜನ ಅಲೆಮಾರಿ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ದಿನ ಬಳಕೆ ವಸ್ತುಗಳ ಕಿಟ್ ವಿತರಣೆ
ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಎ 11 :
ಕಾರ್ಮಿಕ ಇಲಾಖೆಯಿಂದ ಪಟ್ಟಣದಲ್ಲಿ ಎರಡು ಕಡೆಗಳಲ್ಲಿ ಕಟ್ಟಡದ ಕಾರ್ಯನಿರ್ವಹಿಸುತ್ತಿದ್ದ 12 ಜನ ಉತ್ತರ ಪ್ರದೇಶ ಮೂಲದ ಅಲೆಮಾರಿ ಕಟ್ಟಡ ಕಾರ್ಮಿಕರಿಗೆ ಹಾಗೂ ಬುದ್ದಿಮಾಂದ್ಯತೆ ಮಗುವಿದ್ದ ಅಮನ್ನಗರದ ಬಡಕುಟುಂಬಕ್ಕೆ ದಿನ ಬಳಕೆ ವಸ್ತುಗಳ ಕಿಟ್ಗಳನ್ನು ಶನಿವಾರದಂದು ಗೋಕಾಕ ಕಾರ್ಮಿಕ ನಿರೀಕ್ಷಕ ಪಾಂಡುರಂಗ ಮಾವರಕರ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್ ಡೌನ್ನಿಂದಾಗಿ ಕಟ್ಟಡ ಕಾರ್ಮಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದ್ದು ಕಾರ್ಮಿಕರು ಕೆಲಸವಿಲ್ಲದೇ ಕಂಗೆಟ್ಟು ಹೋಗಿದ್ದಾರೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಈ ಉದ್ದೇಶದಿಂದ ಕಾರ್ಮಿಕ ಇಲಾಖೆಯೂ ಕಟ್ಟಡ ಕಾರ್ಮಿಕರಿಗೆ ಯಾವುದೇ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಹೆಲ್ಪ್ಲೈನ್ ಸಂಖ್ಯೆ ನೀಡಿದ್ದು ಇದಕ್ಕೆ ದೂರು ನೀಡಿದ್ದಲ್ಲಿ ತ್ವರಿತಗತಿ ಕಾರ್ಮಿಕರ ಸಹಾಯಕ್ಕೆ ಇಲಾಖೆ ಬರುತ್ತದೆ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಚೆನ್ನಪ್ಪ ಅಥಣಿ, ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಬಸವರಾಜ ಪೋಳ, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ, ಸುಧೀರ ನಾಯರ್ ಮತ್ತಿತರರು ಉಪಸ್ಥಿತರಿದ್ದರು.