RNI NO. KARKAN/2006/27779|Sunday, September 8, 2024
You are here: Home » breaking news » ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಹೋನ್ನತವಾಗಿದೆ : ಡಾ. ರಾಜೇಂದ್ರ ಸಣ್ಣಕ್ಕಿ

ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಹೋನ್ನತವಾಗಿದೆ : ಡಾ. ರಾಜೇಂದ್ರ ಸಣ್ಣಕ್ಕಿ 

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಹೋನ್ನತವಾಗಿದೆ : ಡಾ. ರಾಜೇಂದ್ರ ಸಣ್ಣಕ್ಕಿ

 

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಎ 28 :

 

 

 

ಬಡವ-ಶ್ರೀಮಂತ, ಜಾತಿ-ಮತ, ಪಕ್ಷಪಾತ ಮಾಡದೇ ಅರಭಾಂವಿ ಕ್ಷೇತ್ರದಲ್ಲಿರುವ ಎಲ್ಲ ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಕಾರ್ಯ ಮಾಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಹೋನ್ನತವಾಗಿದೆ. ಪ್ರತಿ ಕುಟುಂಬಗಳು ಮನಪೂರ್ವಕವಾಗಿ ಆಹಾರ ಧಾನ್ಯಗಳನ್ನು ಸ್ವೀಕರಿಸುತ್ತಿರುವುದು ಅವರ ಪ್ರೀತಿ-ಅಭಿಮಾನಕ್ಕೆ ಸಾಕ್ಷಿಯಾಗಿದೆ ಎಂದು ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಮಂಗಳವಾರದಂದು ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸ್ವಂತ ಹಣದಲ್ಲಿ ಕೊಡಮಾಡಿದ ಆಹಾರ ದಿನಸಿ ಕಿಟ್‍ಗಳನ್ನು ವಿತರಿಸಿ ಅವರು ಮಾತನಾಡಿದರು.
ತಮ್ಮ ಜೀವನುದ್ದಕ್ಕೂ ಎಲ್ಲರ ಜೊತೆ ಅವಿನಾಭಾವ ಸಂಬಂಧ ಬೆಳೆಸಿಕೊಂಡು ಎಲ್ಲರೊಂದಿಗೂ ಪ್ರೀತಿ ಆದರದಿಂದ ನೋಡುತ್ತಾ ಮನೆಯ ಹಿರಿಯ ಸದಸ್ಯನಂತೆ ಪ್ರತಿ ಕಷ್ಟದಲ್ಲೂ ಭಾಗಿಯಾಗಿ ಜನತೆಯ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಬಾಲಚಂದ್ರ ಅವರ ಕಾರ್ಯ ಎಷ್ಟೂ ಪ್ರಶಂಶಿಸಿದರೂ ಕಡಿಮೆಯೇ. ಕೊರೋನಾದಂತಹ ಮಹಾಮಾರಿಯ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿ ಅವರ ಮನೆ ಬಾಗಿಲಿಗೆ ದಿನಸಿ ವಸ್ತುಗಳನ್ನು ಪೂರೈಕೆ ಮಾಡುತ್ತಿರುವ ಪುಣ್ಯವಂತ ಶಾಸಕರು ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ನೂಡಲ್ ಅಧಿಕಾರಿ ಜಿ.ಬಿ.ಬಳಗಾರ, ಗ್ರಾಮ ಪಂಚಾಯತಿ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು ಇದ್ದರು.ನಂತರ ಬಿಲಕುಂದಿ, ನಿಂಗಾಪೂರ, ಸಜ್ಜಿಹಾಳ ಗ್ರಾಮಗಳಿಗೆ ದಿನಬಳಕೆಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

Related posts: