RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ಗೋಕಾಕದಲ್ಲಿ ದಲಿತ ಯುವ ವೇದಿಕೆ ಅಧ್ಯಕ್ಷನ ಕಗ್ಗೊಲೆ

ಗೋಕಾಕ:ಗೋಕಾಕದಲ್ಲಿ ದಲಿತ ಯುವ ವೇದಿಕೆ ಅಧ್ಯಕ್ಷನ ಕಗ್ಗೊಲೆ 

ಗೋಕಾಕದಲ್ಲಿ ದಲಿತ ಯುವ ವೇದಿಕೆ ಅಧ್ಯಕ್ಷನ ಕಗ್ಗೊಲೆ

ನಮ್ಮ ಬೆಳಗಾವಿ ಇ – ವಾರ್ತೆ  ಗೋಕಾಕ ಮೇ 7 :

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದಲಿತ ಯುವ ವೇದಿಕೆಯ  ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಘಟನೆ ಬುಧವಾರದಂದು ರಾತ್ರಿ ಇಲ್ಲಿಯ ಆದಿ ಜಾಂಭವ ನಗರದ ಸಮೀಪ ನಡೆದಿದೆ

ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ ಸಿದ್ದು ಅರ್ಜುನ ಕಣಮಡ್ಡಿ (27) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆಯ ದ್ವೇಷದಿಂದ ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಬುಧವಾರ ರಾತ್ರಿ ಮೂವರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಕೊಚ್ಚಿ ಕೊಂದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಗೊಳಗಾದ ಯುವಕನನ್ನು ಗೋಕಾಕ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ.‌ ಪೊಲೀಸರು ತನಿಖೆ ಆರಂಭಿಸಿದ್ದಾರೆ.‌ ಕೊಲೆ‌ ಹಂತಕರ‌ ಶೋಧ ಕಾರ್ಯ ನಡೆದಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರಡ್ಡಿ ಅವರು ಗೋಕಾಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ . ಈ ಕುರಿತು ಗೋಕಾಕ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Related posts: