ಬೆಳಗಾವಿ:ಶಾಸಕಿ ಅಂಜಲಿ ನಿಂಬಾಳ್ಕರ ಅವರ ಭಾವ ಚಿತ್ರ ಸುಟ್ಟು ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ
ಶಾಸಕಿ ಅಂಜಲಿ ನಿಂಬಾಳ್ಕರ ಅವರ ಭಾವ ಚಿತ್ರ ಸುಟ್ಟು ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ
ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಅ 12 :
ಕನ್ನಡ ವಿರೋಧಿ ನೀತಿ ಅನುಸರಿಸಿರುವ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ ಅವರ ಭಾವ ಚಿತ್ರವನ್ನು ಸುಟ್ಟು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿಸಿದರು
ಬುಧವಾರದಂದು ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಸೇರಿದ ಕರವೇ ಕಾರ್ಯಕರ್ತರು ಶಾಸಕಿ ಅಂಜಲಿ ನಿಂಬಾಳ್ಕರ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಶಾಸಕಿ ಅಂಜಲಿ ನಿಂಬಾಳ್ಕರ್ ಶಾಸನ ಸಭೆಯ ಪ್ರತಿನಿಧಿಯಾಗಿ ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವುದು ತರವಲ್ಲ ಛತ್ರಪತಿ ಶಿವಾಜಿ ಮಹಾರಾಜರಿಗೆ ಕರ್ನಾಟಕ ಸರ್ಕಾರ ಅಪಾರ ಗೌರವ ನೀಡಿದೆ.ಕರ್ನಾಟಕ ನೀಡಿದಷ್ಟು ಗೌರವವನ್ನು ಮಹಾರಾಷ್ಟ್ರ ಸರ್ಕಾರವೂ ಕೊಟ್ಟಿಲ್ಲ,ಮನಗುತ್ತಿಯಲ್ಲಿ ನಡೆದ ಘಟನೆಯಲ್ಲಿ ಸರ್ಕಾರದ ಪಾತ್ರ ಏನೂ ಇಲ್ಲ,ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವ ಅಂಜಲಿ ನಿಂಬಾಳ್ಕರ್ ಬಹಿರಂಗ ಕ್ಷಮೆಯಾಚಿಸದಿದ್ದರೆ ಕರವೇ ಕಾರ್ಯಕರ್ತರು ಅವರ ಮನೆ ಎದರು ಧರಣಿ ಮಾಡಬೇಕಾಗುತ್ತದೆ ಎಂದು ದೀಪಕ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಚಾಲಕ ಮಹಾದೇವ ತಳವಾರ,ದಶರಥ ಬನೋಶಿ,ಆರೋಗ್ಯಪ್ಪಾ ಪಾದನಕಟ್ಟಿ,ಸುರೇಶ ಗವಣ್ಣವರ,ರಾಮಾ ವಣ್ಣೂರ,ಗಣೇಶ ರೋಕಡೆ,ಹೊಳೆಪ್ಪಾ ಸುಲದಾಳ,ವಿಜಯ ಹಲಕರ್ಣಿ,ಸಂಪತ್ತ್ ಸಕ್ರೆನ್ನವರ,ಸತೀಶ್ ಗಾಡಿವಡ್ಡರ್,ರಮೇಶ್ ಯರಗಣ್ಣವರ,ಕಿರಣ ಚವ್ಹಾಣ ಸೇರಿದಂತೆ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು