RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ : ಸಾಯೀಶ್ವರಿ ಮೆಣಸಿನಕಾಯಿ

ಗೋಕಾಕ:ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ : ಸಾಯೀಶ್ವರಿ ಮೆಣಸಿನಕಾಯಿ 

ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ : ಸಾಯೀಶ್ವರಿ ಮೆಣಸಿನಕಾಯಿ

 

 

ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಫೆ 2 :

 

 

ಸಮೀಪದ ಶಿಂದಿಕುರಬೇಟ ಗ್ರಾಮ ಪಂಚಾಯತ ವತಿಯಿಂದ ನಿಧಿ ಒಂದರ ಗ್ರಾ.ಪಂ ಯೋಜನೆಯಡಿಯಲ್ಲಿ ಗ್ರಾಮದ ಸ್ವಚ್ಚತೆಯ ಕಸ ವಿಲೇವಾರಿ ಮಾಡುವ ಪ್ರಯುಕ್ತ ನೂತನ ಸ್ವಚ್ಛತಾ ವಾಹನ ಖರೀದಿಸಲಾಯಿತು.
ಮಂಗಳವಾರದಂದು ನೂತನ ವಾಹನಕ್ಕೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಾಯೀಶ್ವರಿ ಮೆಣಸಿನಕಾಯಿ ಮಾತನಾಡಿ ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮಸ್ಥರು ಹಾಗೂ ಸರ್ವ ಗ್ರಾಮ ಪಂಚಾಯತ ಸದಸ್ಯರುಗಳು ಸಹಕಾರ ನೀಡಿದ್ದು , ಮುಂಬರುವ ದಿನಗಳಲ್ಲಿ ಮಾದರಿ ಗ್ರಾಮವನ್ನಾಗಿಸಲು ಪ್ರಯತ್ನಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸರ್ವ ಸದಸ್ಯರುಗಳು ಹಾಗೂ ಗ್ರಾಮದ ಮುಖಂಡರು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts: