ಬೆಳಗಾವಿ:ಮೇಲ್ದರ್ಜೆಗೇರಿಸಿದ ಸಾಂಬ್ರಾ ವಿಮಾನ ನಿಲ್ದಾಣ ಲೋಕಾರ್ಪಣೆ
ಮೇಲ್ದರ್ಜೆಗೇರಿಸಿದ ಸಾಂಬ್ರಾ ವಿಮಾನ ನಿಲ್ದಾಣ ಲೋಕಾರ್ಪಣೆ
ಬೆಳಗಾವಿ ಸೆ 14: ಮೇಲ್ದರ್ಜೆಗೇರಿಸಿದ ಸಾಂಬ್ರಾ ವಿಮಾನ ನಿಲ್ದಾಣವನ್ನು ಗುರವಾರ ಕೇಂದ್ರ ವಿಮಾನಯಾನ ಸಚಿವ ಪಿ. ಅಶೋಕ ಗಜಪತರಾಜು ಲೋಕಾರ್ಪಣೆಗೊಳಿಸಿದರು.
ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಕೊಂಡಾಡಿದ ಬಿಜೆಪಿ ಸಂಸದ ಸುರೇಶ ಅಂಗಡಿ ಅವರು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ಇಡಲು ಮನವಿ ಮಾಡಿಕೊಂಡರು
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಅನಂತಕುಮಾರ, ಸಚಿವರಾದ ರಮೇಶ ಜಾರಕಿಹೊಳಿ, ಡಿ.ಕೆ.ಶಿವಕುಮಾರ್, ಆರ್.ವಿ. ದೇಶಪಾಂಡೆ, ಸಂಸದರಾದ ಪ್ರಭಾಕರ ಕೋರೆ, ಸುರೇಶ ಅಂಗಡಿ, ಶಾಸಕ ಸಂಜಯ ಪಾಟೀಲ ಇತರರು ಇದ್ದರು