RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಕೌಜಲಗಿಯ ವಿವೇಕ ಹಳ್ಳೂರ ಹಾಗೂ ವೆಂಕಟೇಶ್ ಕೌಜಲಗಿ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಗೋಕಾಕ:ಕೌಜಲಗಿಯ ವಿವೇಕ ಹಳ್ಳೂರ ಹಾಗೂ ವೆಂಕಟೇಶ್ ಕೌಜಲಗಿ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ 

ಕೌಜಲಗಿಯ ವಿವೇಕ ಹಳ್ಳೂರ ಹಾಗೂ ವೆಂಕಟೇಶ್ ಕೌಜಲಗಿ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 4 :

 

ತಾಲೂಕಿನ ಕೌಜಲಗಿ ಗ್ರಾಮದ ಜ್ಞಾನ ಜ್ಯೋತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿವೇಕ ಹಳ್ಳೂರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ವೆಂಕಟೇಶ್ ಕೌಜಲಗಿ ಅವರಿಗೆ ಈ ಸಾಲಿನ ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ

ಕೌಜಲಗಿ ಗ್ರಾಮದ ದಿ. ಬಾಳಪ್ಪ ಹೊಸಮನಿ ಪ್ರತಿಷ್ಠಾನ ಪ್ರತಿ ವರ್ಷ ಕೊಡಮಾಡುವ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಸೆ. 5 ರಂದು ಮೂಡಲಗಿಯ ಕೆ.ಎಚ್.ಸೋನವಾಲ್ಕರ ಕಲ್ಯಾಣ ಮಂಟಪದಲ್ಲಿ ಜರುಗುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಹಾಗೂ ಸನ್ಮಾನ ಮಾಡಲಾಗುವದು. ಶೈಕ್ಷಣಿಕ ಕ್ಷೇತ್ರದಲ್ಲಿ ವಿನೂತನ ಕಾರ್ಯಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಕ್ಕಳ ಕಲಿಕಾ ಪ್ರಗತಿಯಲ್ಲಿ ಕಾರ್ಯನಿರ್ವಹಿಸಿದ ಪ್ರಯುಕ್ತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷವು ಇಂತಹ ರಚನಾತ್ಮಕ ಶಿಕ್ಷಕರನ್ನು ಗುರುತಿಸುವ ಮುಖೇನ ಶಿಕ್ಷಕರಲ್ಲಿಯ ಗುಣಾತ್ಮಕ ಶಿಕ್ಷಣವನ್ನು ಉತ್ತೇಜಿಸುವದಾಗಿದೆ ಎಂದು ತಿಳಿಸಿದ್ದಾರೆ.

Related posts: