RNI NO. KARKAN/2006/27779|Saturday, October 19, 2024
You are here: Home » breaking news » ಘಟಪ್ರಭಾ:ಹೋರಾಟಗಳು ಯಶಸ್ವಿಯಾಗಲು ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ : ಬಸವರಾಜ ಖಾನಪ್ಪನವರ

ಘಟಪ್ರಭಾ:ಹೋರಾಟಗಳು ಯಶಸ್ವಿಯಾಗಲು ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ : ಬಸವರಾಜ ಖಾನಪ್ಪನವರ 

ಹೋರಾಟಗಳು ಯಶಸ್ವಿಯಾಗಲು ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ : ಬಸವರಾಜ ಖಾನಪ್ಪನವರ

 

 

ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜ 20 :

 
ಹೋರಾಟಗಳು ಯಶಸ್ವಿಯಾಗಲು ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡಪರ ಹೋರಾಟಗಾರ ಬಸವರಾಜ ಖಾನಪ್ಪನವರ ಹೇಳಿದರು.

ಕನ್ನಡ ರಕ್ಷಣಾ ವೇದಿಕೆ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆಂಪಣ್ಣ ಚೌಕಶಿ ಅವರು ಬುಧವಾರದಂದು ಧುಪದಾಳ ಗ್ರಾಮದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರಿಗೆ ಹಮ್ಮಿಕೊಂಡ ಸನ್ಮಾನಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .
ಕನ್ನಡ ಪರ ಸಂಘಟನೆಗಳು ಕನ್ನಡ ಪರ ಕಾಳಜಿ ಜೊತೆಗೆ ಸಾಮಾಜಿಕ ಕಳಕಳಿ ಹೊಂದಿರಬೇಕು. ಚೌಕಶಿ ಅವರು ಮಾಧ್ಯಮದ ಮಿತ್ರರಿಗೆ ಸನ್ಮಾನಿಸಿ ಗೌರವಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ.ಎಸ್. ರಜಪೂತ, ಪತ್ರಕರ್ತರಾದ ಗಣೇಶ ಗಾಣೀಗ, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಕೆಂಪಣ್ಣ ಚೌಕಶಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಗೋಕಾಕ್ ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರನ್ನಾಗಿ ಕೆಂಪಣ್ಣ ಚೌಕಶಿ ಅವರನ್ನು ಹಾಗೂ ಗೌರವ ಅಧ್ಯಕ್ಷರಾಗಿ ಬಸವರಾಜ್ ಖಾನಪ್ಪನವರ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅನೇಕ ಪತ್ರಕರ್ತರ ಹಾಗೂ ಮಾಧ್ಯಮದವರು ಮತ್ತು ಅನೇಕ ಸಂಘಟನೆಯ ಕಾರ್ಯಕರ್ತರು ಇದ್ದರು.

Related posts: