RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು : ಲಕ್ಷ್ಮಣ ತಪಸಿ

ಗೋಕಾಕ:ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು : ಲಕ್ಷ್ಮಣ ತಪಸಿ 

ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು : ಲಕ್ಷ್ಮಣ ತಪಸಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 23 :

 

ದಿಟ್ಟತನದಿಂದ ಹೋರಾಟ ನಡೆಸುತ್ತಿದ್ದ ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು. ಯುವಕರು ಇಂತಹ ಮಹಾನ ನಾಯಕರ ತತ್ವಾದರ್ಶಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು.
ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳಿಂದ ಹಮ್ಮಿಕೊಂಡ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಭಾರತದ ಏಕತೆ, ಸಾರ್ವಭೌಮತ್ವ ಹಾಗೂ ಅಖಂಡತೆಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ. ಶ್ಯಾಮ ಪ್ರಸಾದ ಮುಖರ್ಜಿ ತಮ್ಮ ತತ್ವ ಸಿದ್ಧಾಂತಗಳಿಗಾಗಿ ಕೊನೆಯೂಸಿರಿನವರೆಗೆ ಹೋರಾಟ ನಡೆಸಿದ್ದರು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಯುವ ಮೋರ್ಚಾ ಅಧ್ಯಕ್ಷರಾದ ಮಂಜುನಾಥ ಪ್ರಭುನಟ್ಟಿ, ಆನಂದ ಅತ್ತುಗೋಳ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ ಭಂಡಿ, ವಿರೇಂದ್ರ ಎಕ್ಕೇರಿಮಠ, ಅಲ್ಪಸಂಖ್ಯಾತ ಮೋರ್ಚಾಧ್ಯಕ್ಷ ಮಲ್ಲಿಕಜಾನ ತಳವಾರ, ಹಿಂದುಳಿದ ವರ್ಗದ ಮೋರ್ಚಾಧ್ಯಕ್ಷ ಲಕ್ಷ್ಮಣ ಖಡಕಭಾಂವಿ, ಲಕ್ಷ್ಮಣ ತಳ್ಳಿ, ಕಿರಣ ಡಮಾಮಗರ, ನಗರಸಭೆ ಸದಸ್ಯರು, ಗಣ್ಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts: