RNI NO. KARKAN/2006/27779|Saturday, October 19, 2024
You are here: Home » breaking news » ಮೂಡಲಗಿ:ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಮಸ್ಥರು

ಮೂಡಲಗಿ:ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಮಸ್ಥರು 

ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಮಸ್ಥರು
ನಮ್ಮ ಬೆಳಗಾವಿ ಇ – ವಾರ್ತೆ,ಮೂಡಲಗಿ ಜೂ 29 :

 

ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು.
ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಶಾಸಕರ ಜನಪರ ಕಾಳಜಿಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಸಿದ್ಧಾಪೂರ, ಸದಸ್ಯರಾದ ರಂಗಪ್ಪ ಪುಗಶೆಟ್ಟಿ, ಉಮಾ ಮಠದ, ಮಹಾದೇವಿ ದೊಡಗೌಡರ, ಶಾರವ್ವ ಲಗಳಿ, ದುರಗಪ್ಪ ಹಡಗಿನಾಳ, ಪ್ರಮುಖರಾದ ಪಾಂಡಪ್ಪ ಹೆಗಡೆ, ಭೀಮಪ್ಪ ಗೊಡಚಿ, ಸಿದ್ದಪ್ಪ ಹೆಗಡೆ, ಮಹಾದೇವ ದೊಡಗೌಡರ, ಶರೀಫ ನದಾಫ, ಬಸಪ್ಪ ಪುಗಶೆಟ್ಟಿ, ಹನಮಂತ ಹೆಗಡೆ, ಪರಮೇಶ್ವರ ಹೆಗಡೆ, ಸೋಮಪ್ಪ ಗಂಗರಡ್ಡಿ, ಯಲ್ಲಪ್ಪ ಆಲಕನೂರ, ಬಸಪ್ಪ ಹೆಗಡೆ, ಯಲ್ಲಪ್ಪ ದೊಡಗೌಡರ, ರಮೇಶ ಸಣ್ಣಕ್ಕಿ, ಬಸವರಾಜ ತೆಗ್ಗಿ, ಬಸವರಾಜ ಗಂಗರಡ್ಡಿ, ಬಸವರಾಜ ಪುಗಶೆಟ್ಟಿ, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Related posts: