RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಗೋಕಾಕ ಮತಕೇತ್ರದ ವಿವಿಧ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದ ಕಾರ್ಮಿಕ ಮುಖಂಡ ಅಂಬಿರಾವ

ಗೋಕಾಕ:ಗೋಕಾಕ ಮತಕೇತ್ರದ ವಿವಿಧ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದ ಕಾರ್ಮಿಕ ಮುಖಂಡ ಅಂಬಿರಾವ 

ಗೋಕಾಕ ಮತಕೇತ್ರದ ವಿವಿಧ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದ ಕಾರ್ಮಿಕ ಮುಖಂಡ ಅಂಬಿರಾವ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 23 :

 
ಗೋಕಾಕ ಮತಕ್ಷೇತ್ರದಲ್ಲಿ ವಿಶೇಷ ಅನುದಾನದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುತ್ತಿದ್ದಾರೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ಗೋಕಾಕ ಮತಕ್ಷೇತ್ರದ ಮಾಲದಿನ್ನಿ, ಉಪ್ಪಾರಹಟ್ಟಿ, ಬೆಣಚಿನಮರ್ಡಿ, ಕೊಳವಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ರಮೇಶ ಜಾರಕಿಹೊಳಿ ಅವರು, ಕ್ಷೇತ್ರದ ಜನರಿಗೆ ಮೂಲಭೂತ ಸೌಕರ್ಯ, ರಸ್ತೆಗಳ ಅಭಿವೃದ್ಧಿ, ಮಕ್ಕಳ ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ನಾವೆಲ್ಲರೂ ಅವರು ಕೈಗೊಳ್ಳುತ್ತಿರುವ ಅಭಿವೃದ್ಧಿಗೆ ಬೆಂಬಲಿಸೋಣ ಎಂದರು.
ಈ ಸಂದರ್ಭದಲ್ಲಿ ಮಾಲದಿನ್ನಿ ಗ್ರಾಮದಲ್ಲಿ 1 ಕೋಟಿ ರೂ, ಉಪ್ಪಾರಹಟ್ಟಿ ಗ್ರಾಮದಲ್ಲಿ 75ಲಕ್ಷ ರೂ, ಬೆಣಚಿನಮರ್ಡಿ ಗ್ರಾಮದಲ್ಲಿ 40 ಲಕ್ಷ ರೂ, ಕೊಳವಿ ಗ್ರಾಮದಲ್ಲಿ 70ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಎಮ್ ಎಲ್ ತೋಳಿನವರ, ಉಪ್ಪಾರಹಟ್ಟಿಯ ಸಿದ್ಧಾರೂಢ ಮಠದ ಶ್ರೀ ನಾಗೇಶ್ವರ ಸ್ವಾಮಿಜಿ, ಮಾಲದಿನ್ನಿ ಗ್ರಾಪಂ ಅಧ್ಯಕ್ಷೆ ರುಕ್ಮವ್ವ ಭರಮನ್ನವರ, ಹನಮಂತ ಬಿ ದುರ್ಗನ್ನವರ, ಹನಮಂತ ಖಿಚಡಿ, ಮಹಾದೇವ ಬಂಡಿ, ಮಹಾದೇವ ಸಿಂಗನ್ನವರ, ರಾಮಸಿದ್ದ ಮಜ್ಜಗಿ, ಸಿದ್ದಪ್ಪ ಗುದಿಗೊಪ್ಪ, ಯಮನಪ್ಪ ಬನಾಜ, ಕರೇಪ್ಪ ಕೊಳವಿ, ಬಾಳಯ್ಯ ಅಜ್ಜನವರ, ತಿಪ್ಪನ್ನ ಕಡಕೋಳ, ಲಕ್ಕಪ್ಪ ಮೆಳವಂಕಿ, ದಶರಥ ಖಿಚಡಿ, ಸಿದ್ದಪ್ಪ ಆಡಿನ, ಸುಭಾಸ ಬಂಡಿ, ಲಕ್ಕಪ್ಪ ಮಾಳಗಿ, ವಿಠ್ಠಕ ಗುಂಡಿ, ಬಾಳೇಶ ಗಿಡ್ಡನ್ನವರ, ಕರೇಪ್ಪ ಬಡಿಗವಾಡ, ಶಂಕರ ಒಣಕಿ, ಅಧಿಕಾರಿಗಳಾದ ಯು ಪಿ ಕಾಂಬಳೆ, ಶಿವಲಿಂಗ ಪಾಟೀಲ, ಗುತ್ತಿಗೇದಾರರಾದ ಶಿವಾನಂದ ಪೂಜೇರಿ, ರಾಮಸಿದ್ಧ ನಾಗನೂರ, ಗೋಣಿ ಸೇರಿದಂತೆ ಮಾಲದಿನ್ನಿ, ಉಪ್ಪಾರಹಟ್ಟಿ, ಬೆಣಚಿನಮರ್ಡಿ, ಕೊಳವಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರುಗಳು, ಗ್ರಾಮಸ್ಥರು ಇದ್ದರು.

Related posts: