RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ

ಗೋಕಾಕ:ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ 

ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ
ಗೋಕಾಕ ಮೇ 29 : ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ನಗರದಲ್ಲಿ ಭಾನುವಾರ ರಾತ್ರಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
ತೆರೆದ ವಾಹನದಲ್ಲಿ ನೆಚ್ಚಿನ ನಾಯಕನಿಗೆ ಮೆರವಣಿಗೆ ನಡೆಸಲಾಯಿತು.ಇಲ್ಲಿನ ನಾಕಾ ನಂ 1 ರಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ,
ಬಸವೇಶ್ವರ ವೃತ್ತ ಮತ್ತಿತರ ಮಾರ್ಗಗಳಲ್ಲಿ ಸಂಚರಿಸಿತು.
ಸಂಗೋಳ್ಳಿ ರಾಯಣ್ಣ , ಡಾ.ಬಿ‌.ಆರ್. ಅಂಬೇಡ್ಕರ್‌, ಬಸವೇಶ್ವರ ಪುತ್ಥಳಿಗಳಿಗೆ ಸಚಿವರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.ತಾಲೂಕಿನ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬಸವೇಶ್ವರ ವೃತ್ತದಲ್ಲಿ ಬಣ್ಣ-ಬಣ್ಣದ ಚಿತ್ತಾರದ ಪಟಾಕಿಗಳನ್ನು ಸಿಡಿಸಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಸತೀಶ ಪರವಾಗಿ ಜೈಕಾರ ಕೂಗಿದರು.
ಈ ಸಂದರ್ಭದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರ ಅಪಾರ ಬೆಂಬಲಿಗರು, ಅಭಿಮಾನಿಗಳು ಉಪಸ್ಥಿತರಿದ್ದರು.

Related posts: