ಗೋಕಾಕ:ಪತ್ರಕರ್ತರು ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ : ಸರ್ವೋತ್ತಮ
ಪತ್ರಕರ್ತರು ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ : ಸರ್ವೋತ್ತಮ
ಗೋಕಾಕ ಜೂ 30 : ಪತ್ರಕರ್ತರು ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು
ಶುಕ್ರವಾರದಂದು ನಗರದ ಪತ್ರಿಕಾ ಕಾರ್ಯಾಲಯದಲ್ಲಿ ಸನ್ 2023-24ನೇ ಸಾಲಿನ ಗುರುತಿನ ಚೀಟಿ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಗುರುತಿನ ಚೀಟಿಗಳನ್ನು ವಿತರಿಸಿ ಮಾತನಾಡಿದ ಅವರು ಸಮಾಜದಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯವಾಗಿದ್ದು, ಪತ್ರಕರ್ತರು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯಮಾಡಿ ಸಮಾಜದ ಸರ್ವೋತೋಮುಖ ಏಳ್ಗೆಗೆ ಸಹಕರಿಸಿ ಸದೃಢ ಸಮಾಜ ನಿರ್ಮಿಸಲು ಸಹಕರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಗುರುಸಿದಪ್ಪ ಪೂಜೇರಿ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸೂರ್ಯಕಾಂತ ಪಾಟೀಲ ಸೇರಿದಂತೆ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಖಜಾಂಚಿ ಮಹಾರುದ್ರ ಮಹಾಲಮನಿ ಸ್ವಾಗತಿಸಿದರು, ಕಾರ್ಯದರ್ಶಿ ಸಾದಿಕ ಹಲ್ಯಾಳ ನಿರೂಪಿಸಿ, ವಂದಿಸಿದರು