ಗೋಕಾಕ:ಚನ್ನಬಸವೇಶ್ವರ ವಿದ್ಯಾ ಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ
ಚನ್ನಬಸವೇಶ್ವರ ವಿದ್ಯಾ ಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ
ಗೋಕಾಕ ಜೂ 5 : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಸಸಿ ನೆಡುವ ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರು ಹಾಗೂ ಇಲ್ಲಿಯ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಬುಧವರಾದಂದು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಆಡಳಿತಾಧಿಕಾರಿ ಅಡವೀಶ ಗವಿಮಠ, ಮುಖ್ಯೋಪಾಧ್ಯಾಯಿನಿ ದಾಕ್ಷಾಯಿನಿ ಮಠಪತಿ ಇದ್ದರು.