RNI NO. KARKAN/2006/27779|Friday, October 18, 2024
You are here: Home » breaking news » ರಾಮದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ : ಮನನೊಂದು ವಿದ್ಯಾರ್ಥಿ ಆತ್ಮಹತೆ

ರಾಮದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ : ಮನನೊಂದು ವಿದ್ಯಾರ್ಥಿ ಆತ್ಮಹತೆ 

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ : ಮನನೊಂದು ವಿದ್ಯಾರ್ಥಿ ಆತ್ಮಹತೆ

ರಾಮದುರ್ಗ ಮೇ 13: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲಾಗಿದ್ದರಿಂದ ವಿದ್ಯಾರ್ಥಿ ಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಜರುಗಿದೆ.

ಬಿಜಗುಪ್ಪಿ ಗ್ರಾಮದ ಕೃಷ್ಣಾ ಕಂಬಾರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಿನ್ನೆ ಫಲಿತಾಂಶ ಬಂದಿದ್ದು, ಗಣಿತ ವಿಷಯದಲ್ಲಿ ಈತ ಫೇಲಾಗಿದ್ದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ

ಕಟಕೋಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts: