RNI NO. KARKAN/2006/27779|Friday, October 18, 2024
You are here: Home » breaking news » ಬೆಳಗಾವಿ:ಬೆಳಗಾವಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದವರ ಬಂಧನ

ಬೆಳಗಾವಿ:ಬೆಳಗಾವಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದವರ ಬಂಧನ 

ಬೆಳಗಾವಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದವರ ಬಂಧನ
ಬೆಳಗಾವಿ ಮಾ 20: ಆನೆ ದಂತು ಎಂದು ಹೇಳಿ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಗುಂಪನ್ನು ಬೆಳಗಾವಿ ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರದಂದು ನಡೆದಿದೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಮಂತೂರ್ಗಾದ ನಿವಾಸಿಗಳಾದ ನಾಗೇಶ ಮಾದರ (23) , ರಾಮಚಂದ್ರ ದಳವಿ (26) , ಹಡಲಗಾದ ರವೀಂದ್ರ ಕೋಲಕಾರ (27) , ಛಾಪಗಾವದ ಪರಶುರಾಮ ನಿಲಜಕರ (23) , ಮತ್ತು ಅಮನ ಕಣಬರ್ಗಿ (20) ಎಂಬುವವರ ಗುಂಪು ಆನೆತಂತು ಎಂದು ಹೇಳಿ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಬಂಧಿತರಿಂದ 11.5 ಕೆಜಿ ಕೊಂಬು , ನಗದು 25 ಸಾವಿರ ವಶ ಪಡಿಸಿಕೊಂಡಿದ್ದಾರೆ ಎಂದು ಬೆಳಗಾವಿ ನಗರ ಪೊಲೀಸ ಆಯುಕ್ತ ಡಾ.ಡಿ.ಸಿ.ರಾಜಪ್ಪ ತಿಳಿಸಿದ್ದಾರೆ

ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ

ಈ ಸಂದರ್ಭದಲ್ಲಿ ಡಿಸಿಪಿಗಳಾದ ಸೀಮಾ ಲಾಟಕ್ಕರ, ಮಹಾನಿಂಗ ನಂದಗಾಂವಿ ಉಪಸ್ಥಿತರಿದ್ದರು

Related posts: