RNI NO. KARKAN/2006/27779|Monday, September 16, 2024
You are here: Home » breaking news » ಘಟಪ್ರಭಾ:ಸಿದ್ಧರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಒತ್ತಾಯ

ಘಟಪ್ರಭಾ:ಸಿದ್ಧರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಒತ್ತಾಯ 

ಸಿದ್ಧರಾಮಯ್ಯ ಅವರಿಗೆ  ಬಾದಾಮಿ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಒತ್ತಾಯ

ಘಟಪ್ರಭಾ ಏ 19 : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಉತ್ತರ ಕರ್ನಾಟಕದ ಬಾದಾಮಿ ಕ್ಷೇತ್ರದಿಂದ ಪಕ್ಷದಪರವಾಗಿ ಟಿಕೆಟ ನೀಡಬೇಕೆಂದು ಪಕ್ಷದ ರಾಷ್ಟ್ರೀಯ ಮುಖಂಡರಲ್ಲಿ ಅರಬಾಂವಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಭರಮಣ್ಣಾ ಉಪ್ಪಾರ ಆಗ್ರಹಿಸಿದ್ದಾರೆ.
ಗುರುವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇದು ಅರಭಾಂವಿ ಮತಕ್ಷೇತ್ರದ ವ್ಯಾಪ್ತಿಯ ಕಾಂಗ್ರೇಸ್ ಪಕ್ಷದ ಜಿ.ಪಂ ಸದಸ್ಯರು, ತಾ.ಪಂ ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಆಗ್ರಹವಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಉತ್ತರ ಕರ್ನಾಟಕದ ಬಾದಾಮಿ ಕ್ಷೇತ್ರದಿಂದ ಪಕ್ಷದ ಪರವಾಗಿ ಟಿಕೀಟ ನೀಡಿದರೆ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಒಂದು ದೊಡ್ಡ ಬಲ ಬಂದಂತಾಗುತ್ತದೆ.
ಅಲ್ಲದೆ ಹಿಂದಿನ ಇತಿಹಾಸ ನೋಡಿದರೆ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಾದಾಮಿಯಿಂದ ಸ್ಪರ್ಧಿಸಿದರೆ ಉತ್ತರ ಕರ್ನಾಟಕದ ಎಲ್ಲ ಕಾಂಗ್ರೇಸ್ ಅಭ್ಯರ್ಥಿಗಳ ಪ್ರಚಾರಕ್ಕೆ ಹುಮ್ಮಸ್ಸು ತುಂಬಿದಂತಾಗುತ್ತದೆ. ಇದರಿಂದ ನಮಗೆ ಹೆಚ್ಚು ಸ್ಥಾನ ಗೆಲ್ಲಲು ಸಹಕಾರಿಯಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರದಿಂದ ಪಕ್ಷದಪರವಾಗಿ ಟಿಕೀಟ ನೀಡಿಬೇಕೆಂದು ಪಕ್ಷದ ರಾಷ್ಟ್ರೀಯ ಮುಖಂಡರಲ್ಲಿ ಭರಮಣ್ಣಾ ಉಪ್ಪಾರ ಆಗ್ರಹಿಸಿದ್ದಾರೆ.

Related posts: