ಗೋಕಾಕ:ಕೇವಲ ಐದು ಜನ ಮುಖಂಡರೊಂದಿಗೆ ನಾಳೆ ಶಾಸಕ ಬಾಲಚಂದ್ರ ನಾಮಪತ್ರ ಸಲ್ಲಿಕೆ
ಕೇವಲ ಐದು ಜನ ಮುಖಂಡರೊಂದಿಗೆ ನಾಳೆ ಶಾಸಕ ಬಾಲಚಂದ್ರ ನಾಮಪತ್ರ ಸಲ್ಲಿಕೆ
ಗೋಕಾಕ ಏ 23 : ಅರಭಾವಿ ಕ್ಷೇತ್ರದ ಬಿಜೆಪಿ ಅಧೀಕೃತ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಾಳೆ ಮಂಗಳವಾರದಂದು ಮ. 1 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಕೇವಲ ಐದು ಜನ ಮುಖಂಡರೊಂದಿಗೆ ಇಲ್ಲಿನ ಮಿನಿ ವಿಧಾನಸೌಧದ ತಹಶೀಲ್ದಾರ ಕಛೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸುವರು.
ನಾಮಪತ್ರ ಸಲ್ಲಿಸಿದ ಬಳಿಕ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ಧೇಶಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಾತನಾಡಲಿದ್ದಾರೆ.
ನಾಳೆ ನಡೆಯಲಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅರಭಾವಿ ಮಂಡಲದ ಎಲ್ಲ ಕಾರ್ಯಕರ್ತರು, ಮುಖಂಡರು, ಜನಪ್ರತಿನಿಧಿಗಳು ಪಾಲ್ಗೊಳ್ಳಬೇಕೆಂದು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ಪ್ರಕಟಣೆಯಲ್ಲಿ ಕೋರಿದ್ದಾರೆ.