ಗೋಕಾಕ:ಜನೇವರಿ 2ರಂದು ಬೆಳಗಾವಿ ಜಿಲ್ಲಾಧ್ಯಂತ ಸಂತ ಕನಕದಾಸರ ಜಯಂತಿ ಉತ್ಸವ : ಡಾ.ರಾಜೇಂದ್ರ ಸಣ್ಣಕ್ಕಿ
ಜನೇವರಿ 2ರಂದು ಬೆಳಗಾವಿ ಜಿಲ್ಲಾಧ್ಯಂತ ಸಂತ ಕನಕದಾಸರ ಜಯಂತಿ ಉತ್ಸವ : ಡಾ.ರಾಜೇಂದ್ರ ಸಣ್ಣಕ್ಕಿ
ಗೋಕಾಕ ಡಿ 25 : ಜನೇವರಿ 2ರಂದು ಬೆಳಗಾವಿ ಜಿಲ್ಲಾಧ್ಯಂತ ಸಂತ ಕನಕದಾಸರ ಜಯಂತಿ ಉತ್ಸವ ಕಾರ್ಯಕ್ರಮ ನಡೆಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿತ್ರನಟ ಹಾಗೂ ಮಾಜಿ ಸಚಿವ ಅಂಬರೀಷ ಅವರ ನಿಧನದಿಂದಾಗಿ ಮುಂದೂಲ್ಪಟ್ಟ ಕನಕ ಜಯಂತಿಯನ್ನು ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕನಕ ಜಯಂತಿ ಕಾರ್ಯಕ್ರಮವನ್ನು ಬುಧವಾರ ದಿ. 2 ರಂದು ಆಚರಿಸಲು ನಿರ್ಧರಿಸಲಾಗಿದ್ದು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ತಮ್ಮ ತಾಲೂಕು ಕೇಂದ್ರಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.