ಗೋಕಾಕ:ಡಾ.ಶಿವಕುಮಾರ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಡಾ.ಶಿವಕುಮಾರ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ ಜ 21 : ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಕರ್ನಾಟಕ ರತ್ನ ತುಮಕೂರು ಸಿದ್ಧಗಂಗಾ ಮಠದ ಪೀಠಾಧಿಪತಿಯಾಗಿದ್ದ ಡಾ.ಶಿವಕುಮಾರ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಶ್ರೀಗಳ ನಿಧನದಿಂದ ಇಡೀ ದೇಶವೇ ಶೋಕ ಸಾಗರದಲ್ಲಿ ಮುಳುಗಿದೆ. ತ್ರಿವಿಧ ದಾಸೋಹಿಯಾಗಿದ್ದ ಶ್ರೀಗಳು ಬಡಮಕ್ಕಳಿಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಮಕ್ಕಳ ಪಾಲಿಗೆ ಕಾಮಧೇನು ಆಗಿದ್ದರು. ಅನ್ನ-ಅಕ್ಷರ-ಜ್ಞಾನದ ದಾರಿ ತೋರಿದ ಗುರುಗಳಾಗಿದ್ದ ಶ್ರೀಗಳು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಮಾಡಿದ್ದರು. ಯಾವುದೇ ಜಾತಿ-ಧರ್ಮಗಳನ್ನು ಲಕ್ಷಾಂತರ ಭಕ್ತರ ಸಮಾಜದ ಏಳ್ಗೆಗಾಗಿ ಇಡೀ ಜೀವನವನ್ನೇ ತೇಯ್ದು ಕ್ರಾಂತಿ ಪುರುಷರಾಗಿದ್ದರು. ಬಸವಣ್ಣನವರ ಕಾಯಕವೇ ಕೈಲಾಸದ ತತ್ವದಡಿ ತಮ್ಮ ಇಡೀ ಜೀವನವನ್ನೇ ಭಕ್ತರಿಗೆ ಮೀಸಲಿಟ್ಟು ಈ ಶತಮಾನದ ಮಹಾನ್ ಕಾಯಕಯೋಗಿ ಆಗಿದ್ದರೆಂದು ತಮ್ಮ ಶೋಕ ಸಂದೇಶದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.