ಬೆಳಗಾವಿ:ಲೋಕ ಸಮರ : ನಾಮಪತ್ರ ಸಲ್ಲಿಸಿದ ಮೈತ್ರಿ ಅಭ್ಯರ್ಥಿ ಸಾಧುನ್ನವರ
ಲೋಕ ಸಮರ : ನಾಮಪತ್ರ ಸಲ್ಲಿಸಿದ ಮೈತ್ರಿ ಅಭ್ಯರ್ಥಿ ಸಾಧುನ್ನವರ
ನಮ್ಮ ಬೆಳಗಾವಿ ಸುದ್ದಿ , ಬೆಳಗಾವಿ ಮಾ 29 :
ಬೆಳಗಾವಿ ಲೋಕಸಭಾ ಚುನಾವಣೆಗೆ ಕೈ ಪಕ್ಷದಿಂದ ಟಿಕೆಟ್ ಗೀಟ್ಟಿಸಿಕೊಂಡಿರುವ ವಿ.ಎಸ್. ಸಾಧುನ್ನವರ ಅವರು ಇಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು
ನಾಮಪತ್ರ ಸಲ್ಲಿಸಲು ಬೃಹತ್ ಪ್ರಮಾಣದ ಬೆಂಬಲಿಗೊಂದರಿಗೆ ಆಗಮಿಸಿದ ಸಾಧುನ್ನವರ ನಗರದ ಸಂಗೋಳ್ಳಿರಾಯಣ್ಣ ವೃತ್ತದಿಂದ ಚನ್ನಮ್ಮ ವೃತ್ತದ ವರೆಗೆ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶಿಸಿದರು . ನಂತರ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿ , ಚುನಾವಣಾಧಿಕಾರಿ ಎಸ್.ಬಿ.ಭೋಮ್ಮನಹಳ್ಳಿ ಅವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು
ಬೆಳಗಾವಿ ಜಿಲ್ಲಾ ಉಸ್ತುವಾರಿ ಮಂತ್ರಿ ಸಚಿವ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಅಂಜಲಿ ನಿಂಬಾಳಕರ್, ಶಾಸಕ ಮಹಾಂತೇಶ ಕೌಜಲಗಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಮಾಜಿ ಶಾಸಕರಾದ ಫಿರೋಜ್ ಸೇಠ್, ಅಶೋಕ ಪಟ್ಟಣ, ಡಿ.ಬಿ. ಇನಾಮಾದಾರ, ಜಿಪಂ ಸದಸ್ಯ ಶಂಕರ ಮಾಡಲಗಿ, ಕಾಂಗ್ರೆಸ್ ಮುಖಂಡರಾದ ವಿನಯ ನಾವಲಗಟ್ಟಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು